Wednesday 25 April 2012

ಶುಭಾಷೆಯ ಗೆಳತಿ

ನಾ ಬರದಷ್ಟು ದೂರುಳಿದೆ ನಿನ್ನ ಮದುವೆಗೆ
ಎಷ್ಟು ಕಷ್ಟವಾಯಿತೋ ಗೊತ್ತೇ ನನ್ನ ನೆರಳಿಗೆ
ನನ್ನ ಬಿಟ್ಟು ಹಾರಿ ಬರಲು ಸಜ್ಜಾಗಿತ್ತು ಅದು
ಹಿಡಿದಿಟ್ಟ ಅಷ್ಟು ಹೊತ್ತೂ ಕೆಲಸ ಬಿತ್ತು ಬೆರಳಿಗೆ


ಅನಿಸಿತು, ಕರೆ ಮಾಡಿ ಸಾದಾರನವಾಗುವುದು ಬೇಡ
ಬೆಂಬಲಕೆ ನಿಂತಿತ್ತು ನನ್ನ ಮನವೂ ಕೂಡ
ಕಾಣಿಕೆಯೂ ಕೊಡದಷ್ಟು ಪಾಪಿಯಾದೆ ನಿನಗೆ ಇಂದು
ಮುಡಿಪಾಗಿರಿಸಲಾಗಲಿಲ್ಲ ನಿನಗೊಂದು ಹಾಡ

ಇಷ್ಟು ದಿನ ಆಗಿದ್ದೆ ಕಡಲೊಳಗಿನ ಒಂದು ಅಲೆ
ಈಗ ಸಿಕ್ಕಿರುವುದು ನಿನಗೂ ಒಂದು ತೀರ
ಯಾರಿಂದಲೂ ದೂರಪದಿಸಲಾಗದಂತೆ ಹೀರಿಕೊಳಲಿ
ನೀ ಬಿಡದೆ ಸೇರಿಕೋ ಅದರ ಅಂತರಾಳ


ನೀನಾಗು ಕಾಲಿ ಆಗಸಕೆ ಮಳೆ ಬಿಲ್ಲು
ನಿನ್ನವನ ಸಾಂಗತ್ಯದಿ ಎಲ್ಲವನ್ನು ಗೆಲ್ಲು
ಆಗಾಗ ಹಿಂದಿರುಗಿ ನೋಡಬೇಕು ನಡೆದ ದಾರಿ
ಅದಕಾಗಿ ತಿರುಗಿನೋಡಲೆಂದು ಒಮ್ಮೆ ನಿಲ್ಲು


ಅರಸುವಷ್ಟು ಹಿರಿಯನಲ್ಲ, ಹೇಳುವಷ್ಟು ಜಾಣನಲ್ಲ
ನಿನ್ನ ಜೀವನದಲಿ ಹೊರಳಿಸಿದ ಒಂದು ಪುಟ ನಾನು
ನಿನ್ನ ಹೊಸ ಬದುಕಿನಲ್ಲಿ ಹೀಗೊಂದು ಗುರುತ ಕೊಟ್ಟು
ನೆನಪಾಗಿ ಉಳಿಯುವ ಈ ಯತ್ನ ನನ್ನದು..........


ಹಸಿರಾಗಿರಲಿ ನಿನ್ನ ಬಾಳು ಎಂದಿನಂತೆ, ಇದೆ ಗೆಳೆಯರೆಲ್ಲರ ಪರವಾಗಿ ನನ್ನ ಕೋರಿಕೆ. ಅಭಿನಂದನೆ ಗೆಳತಿ.

                                                                            ಇಂತಿ ನಿನ್ನ ಮಿತ್ರ,
                                                                                  - ರತ್ನಸುತ


No comments:

Post a Comment

ದಣಿವಾರಿ ಕೊಳದಲಿ

ದಣಿವಾರಿ ಕೊಳದಲಿ  ಕೆಂದಾವರೆ ಅರಳಿದೆ  ಮುಗಿಲೇರಿ ಬರದಲಿ  ಹನಿಗೂಡಲು ಇಳಿದಿದೆ  ರವಿಕಾಂತಿ ಸವಿಯುತ  ಹರಳಂತೆ ಮಿನುಗುತಾ  ಬೆರಗಲ್ಲೇ ತಯಾರಿಯಾಗುತಿದೆ  ಮನದಂಗಳ ಮುಂಜಾನೆಯ...