Saturday, 21 April 2012

ಪ್ರಭಾವಿ ಸಾಲುಗಳು ಮಿತ್ರನಿಂದ

ಮಿತ್ರನೊಬ್ಬ ಹೇಳಿದ ಹೀಗೆರಡು ಸಾಲುಗಳು
"ಲೋಕವೆಲ್ಲ ತಿರುಗಿದರು, ಪದ ಹರಿಯದು....
ಶಬ್ದಕೋಶ ಅರಿತರು, ಪದ ಹರಿಯದು....
ಭಾವನೆಗಳ ತಿಳಿದಾಗ, ಪದ ನಿಲ್ಲದು...."

ಹೇಗೆ ಹೊಳೆದಿರಬಹುದು ಅವನಿಗೆ ಇವೆಲ್ಲ?
ಅವನಿಗೂ ಕಾವ್ಯ ಮಾರ್ಗ ಸಿಕ್ಕಿರಬೇಕಲ್ಲ!!
ನನಗವನ ಸಾಂಗತ್ಯ ಅತ್ಯವಶ್ಯಕವೆನಿಸಿದೆ
ಹೇಗಾದರೂ ಜೊತೆಗೆ ಸೆಳೆದುಕೊಳ್ಳಬೇಕಲ್ಲ!!!!!!

ಬೆನ್ನು ತಟ್ಟುವವನು ಪೆನ್ನು ಹಿಡಿದನೆಂದರಲ್ಲಿಗೆ
ನಿಶ್ಚಯವಾದಂತೆಯೇ ಸೇರ್ಪದಲು ಕವಿಗಳ ಸಾಲಿಗೆ
ಕನ್ನಡ ಕವಿವಾಣಿಯನ್ನು ಅವಲಂಬಿಸಿರುವನು ಅವನು 
ಅವನದೂ ಆಗಲಿ ಬೆಲೆ ಕಟ್ಟಲಾಗದ ನಾಲಿಗೆ

ಕನ್ನಡ ಡಿಂಡಿಮದ ಸದ್ದು, ಎಂತವರನೂ ಕರಗಿಸುವುದು
ಪ್ರತಿಯೊಂದು ಕನ್ನಡಿಗನ ಶಿಲೆಯಾಗಿ ರೂಪಿಸಿ 
ನಮ್ಮತನವ ಗುರುತಿಸುವ ಅನ್ಯರಲ್ಲೂ ಕಲೆಯಿದೆ
ಕಲಾ ರಸಿಕತನ ಅವರ ಕಣ್ಣಲಿ ಪ್ರತಿಬಿಂಬಿಸಿ

ಇಷ್ಟು ಹೇಳಿ ಮುಗಿಸಲಾರೆ ಕೃತಜ್ಞತಾ ಪೂರ್ವಕವನ 
ಆಶಿಸುವೆ ನಿನಗೆ ನಾಳೆಗಳ ಹೊಸತು ಬೆಳಕು
ಇಟ್ಟ ಹೆಜ್ಜೆಯೆಡೆಗೆ ನಿನ್ನ ಸಾಧನೆಯ ಹಾದಿಯುಂಟು
ನಿನ್ನಲ್ಲೇ ಅವೆತ  ಆ  ಕವಿಯನ್ನು ಕೆದಕು.......

                                                -ರತ್ನಸುತ

3 comments:

ಹೃದಯವ ನೀಡಲೇ

ಹೃದಯವ ನೀಡಲೇ ಹೇಳದ ಮಾತಿವೆ ನೂರಾರು ಆಲಿಸು ಈಗಲೇ ಪಾಲಿಸಿ ನಿನ್ನಯ ನೆರಳನು ಹೃದಯವ ನೀಡಲೇ ಹೊಂಗನಸ ಅಂಗಳದಿ ಅರಳಿರುವ ಚಂದಿರ ನೀ  ಯಾರಿರದ ತೀರದಲಿ ಅಲೆಗಳಲೂ ನಿನ್ನ ದನಿ  ...